ಮಂಗಳೂರು; ಸೌದಿ ಕರೆನ್ಸಿ ಎಂದು ಕಾಗದದ ಕಟ್ಟನ್ನು ನೀಡಿ 4 ಲಕ್ಷ ರೂ ವಂಚನೆ!

ಮಂಗಳೂರು;ಸೌದಿಅರೇಬಿಯಾದ ಕರೆನ್ಸಿ ಎಂದು ಹಣ ಪಡೆದು ಕಾಗದದ ಕಟ್ಟನ್ನು ನೀಡಿ 4ಲಕ್ಷ ರೂ. ವಂಚಿಸಿರುವ ಘಟನೆ ಕುರಿತು ದೂರು ದಾಖಲಾಗಿದೆ.

ಮುಡಿಪುವಿನಲ್ಲಿರುವ ತಾಜ್‌ಬುಕ್‌ ಸ್ಟಾಲ್‌ ಎಂಬ ಅಂಗಡಿಗೆ ಬಂದಿದ್ದ ಓರ್ವ ಅಪರಿಚಿತ ಸೌದಿ ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ಇದ್ದು ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ಹೇಳಿದ್ದಾನೆ.

ಇದಕ್ಕೆ ಒಪ್ಪಿದ ಅಂಗಡಿಯಾತನಿಗೆ ಕರೆ ಮಾಡಿ 4 ಲಕ್ಷ.ರೂ.ಗಳೊಂದಿಗೆ ಮಂಗಳೂರಿಗೆ ಬಂದು ಕರೆ ಮಾಡುವಂತೆ ಆರೋಪಿ ತಿಳಿಸಿದ್ದ.ಅದರಂತೆ ಅಂಗಡಿಯಾತ ನಿನ್ನೆ ಆತನಿಗೆ ಕರೆಮಾಡಿ ನಗರದ ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ ನಿಲ್ದಾಣಕ್ಕೆ ಹೋಗುವ ಮೈದಾನದ ಬಳಿ ಇರುವ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಕಾಯುವಂತೆ ತಿಳಿಸಿದ್ದಾನೆ.ಇದರಂತೆ ಅಂಗಡಿ‌ ಮಾಲಕ ಕಾದು ನಿಂತಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿ ಅಂಗಡಿಯಾತನಿಂದ 4 ಲಕ್ಷ ರೂ.ಪಡೆದು ಆತನ ಕೈಯಲ್ಲಿದ್ದ ಪ್ಲಾಸ್ಟಿಕ್‌ ಕಟ್ಟನ್ನು ನೀಡಿ ತೆರಳಿದ್ದಾನೆ.

ಅಂಗಡಿಯಾತ ಕಟ್ಟನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕಾಗದ ತುಂಡುಗಳನ್ನು ಮಡಚಿ ಒಂದರ ಮೇಲೆ ಒಂದರಂತೆ ನೋಟಿನಂತೆ ಇಟ್ಟಿರುವುದು ಕಂಡು ಬಂದಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com