ಮಂಗಳೂರು:ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ.
ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು.ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆಗೆ ಸಂಬಂಧಿಸಿ ಐದು ಎಫ್ ಐ ಆರ್ ದಾಖಲಾಗಿದೆ.
ಇತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.ಹೆಚ್ಚಿನ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
ಬುಧವಾರ ರಾತ್ರಿ ವೇಳೆ ಮೂಡುಬಿದಿರೆ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಮೂಡುಶೆಡ್ಡೆಯ ಮತಗಟ್ಟೆಯ ಬಳಿ ತೆರಳಿ ಕಾರ್ಯಕರ್ತರ ಬಳಿ ಮಾತನಾಡುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಬಿಜೆಪಿಗರು ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದಾಗ, ಮಿಥುನ್ ರೈ ಮತ್ತವರ ಬೆಂಬಲಿಗರು ‘ಕಾಂಗ್ರೆಸ್ಗೆ ಜೈ’ ಘೋಷಣೆ ಕೂಗಿದ್ದಾರೆ. ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಹೊಡೆದಾಟ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಬಳಿಕ ಕಾವೂರು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.ಹೊರಗಿನ ವ್ಯಕ್ತಿಗಳಿಗೆ ಮೂಡುಶೆಡ್ಡೆ ವ್ಯಾಪ್ತಿಯೊಳಗೆ ಅವಕಾಶ ನಿರಾಕರಿಸಲಾಗಿತ್ತು.ಪೊಲೀಸರು ಸ್ಥಳದಲ್ಲಿ ಕಣ್ಗಾವಲಿಟ್ಟು ಪರಿಸ್ಥಿತಿ ನಿಯಂತ್ರಿಸಿದ್ದಾರೆ.