ಮುತಾಲಿಕ್ ಗೆ ಕಾರ್ಕಳದಲ್ಲಿ ಸಿಕ್ಕಿದ್ದು ಬರೀ ಎಷ್ಟು ಮತ ಗೊತ್ತಾ?

ಕಾರ್ಕಳ;ರಾಜ್ಯ ವಿಧಾನ ಸಭಾ ಚುನಾವಣೆ ಫಲಿತಾಂಶ ಹೊರಬಿದ್ದು ಕಾಂಗ್ರೆಸ್ 135 ಸ್ಥಾನ ಪಡೆಯುವ ಮೂಲಕ ಸರಕಾರ ರಚನೆಗೆ ಮುಂದಾಗಿದೆ.

ಬಿಜೆಪಿಯ ಲೆಕ್ಕಾಚಾರಗಳೆಲ್ಲವೂ ಈ ಬಾರಿ ತಲೆಕೆಳಗಾಗಿದ್ದು ಹಲವು ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶ ಪ್ರಕಟವಾಗಿದೆ.ಕಾರ್ಕಳ ವಿಧಾನ ಸಭಾ ಕ್ಷೇತ್ರದ ಫಲಿತಾಂಶ ಈ ಬಾರಿ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು.

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ‌ನಿಂದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಆಪ್ತ ಎಂದು ಹೇಳಲಾಗುತ್ತಿದ್ದ ಉದಯ್​​ ಶೆಟ್ಟಿ ಅವರನ್ನು ಕಣಕ್ಕೆ ಇಳಿಸಲಾಗಿತ್ತು.ಬಿಜೆಪಿಯಿಂದ ಸಚಿವರಾಗಿದ್ದ ಸುನಿಲ್ ಕುಮಾರ್ ಸ್ಪರ್ಧೆಗೆ ಇಳಿದಿದ್ದರು. ಆದರೆ ಸುನಿಲ್​​ ಕುಮಾರ್​ ಅವರ ರಾಜಕೀಯ ಗುರು ಎಂದು ಹೇಳಲಾಗುತ್ತಿದ್ದ, ಶಿವ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಈ ಬಾರಿ ಚುನಾವಣೆಯಲ್ಲಿ ಶಿಷ್ಯನ ಮುಂದೆ ನಿಂತುಕೊಂಡಿದ್ದರು.
ಇದು ಈ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.

ಸುನಿಲ್ ಕುಮಾರ್ ವಿರುದ್ಧ ಮುತಾಲಿಕ್ ಹಲವು ಆರೋಪ ಮಾಡಿದ್ದರು.ಹಿಂದೂ ಫೈರ್​ ಬ್ರಾಂಡ್​​ ಎನ್ನಿಸಿಕೊಂಡಿರುವ ಪ್ರಮೋದ್ ಮುತಾಲಿಕ್ ಹಿಂದುತ್ವ ಎಂದು ಓಡಾಡುತ್ತಿದ್ದರು.ಹಿಂದೂ ಕಾರ್ಯಕರ್ತರ ಪರ ಮಾತಮಾಡುತ್ತಿದ್ದರು.ಇದರಿಂದಾಗಿ ಸುನಿಲ್​​​ ಕುಮಾರ್ ಮತ್ತು ಗುರು ಮುತಾಲಿಕ್ ನಡುವೆ ಜಿದ್ದಾಜಿದ್ದಿ ನಡೆಯಲಿದೆ ಎನ್ನಲಾಗಿತ್ತು.

ಆದರೆ ಫಲಿತಾಂಶವು ಹಲವು ಕುತೂಹಲಕ್ಕೆ ತೆರೆಬಿದ್ದಿದ್ದು, ಕಾರ್ಕಳದಲ್ಲಿ ಸ್ಪರ್ಧೆ ಏರ್ಪಟ್ಟಿದ್ದು ಬಿಜೆಪಿಯ ಸುನಿಲ್ ಕುಮಾರ್ & ಕಾಂಗ್ರೆಸ್ ನ ಉದಯ್ ಶೆಟ್ಟಿ ನಡುವೆ ಎನ್ನುವುದು ಬಯಲಾಗಿದೆ.ಮೂತಲಿಕ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಕಾರ್ಕಳದ ಜನ ಮುತಾಲಿಕ್ ಗೆ ತಿರಸ್ಕರಿಸಿದ್ದಾರೆ.

ಕಾರ್ಕಳದಲ್ಲಿ ಸುನಿಲ್ ಕುಮಾರ್ ಕಾಂಗ್ರೆಸ್ ನ ಉದಯ್ ವಿರುದ್ಧ 5,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಸುನಿಲ್ ಅವರು 77,028 ಮತಗಳನ್ನು ಪಡೆದರೆ, ಉದಯ ಕುಮಾರ್ ಶೆಟ್ಟಿ ಅವರು 72,426 ಮತಗಳನ್ನು ಗಳಿಸಿದರು.ಇನ್ನು ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಅವರು 4508 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ.

ಇನ್ನು ಕಾರ್ಕಳದಲ್ಲಿ ಜೆಡಿಎಸ್​​ನಿಂದ ಶ್ರೀಕಾಂತ್ ಕೊಚ್ಚೂರು ಸ್ಪರ್ಧಿಸಿದ್ದು ಸೋತಿದ್ದಾರೆ.ಎಎಪಿಯಿಂದ ಡೇನಿಯಲ್​​ ಕೂಡ ಕಡಿಮೆ ಮತಗಳನ್ನು ಪಡೆದು ಸೋತಿದ್ದಾರೆ.ಒಟ್ಟಾರೆಯಾಗಿ ಇಲ್ಲಿ ಮತದಾರ ಮತ್ತೆ ಸುನಿಲ್​​ ಕುಮಾರ್​ ಅವರ ಕೈ ಹಿಡಿದು ವಿಧಾನಸಭೆಗೆ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com