ನವದೆಹಲಿ; ನಾವು ಅಮಿತ್ ಶಾ ಮನೆಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋಗಿದ್ದೆವು ಆದರೆ ಅನಮತಿ ನೀಡಿಲ್ಲ ಎಂದು ಚನ್ನಪಟ್ಟಣ ಮೂಲದ ನವ್ಯಶ್ರೀ ರಾವ್ ಹೇಳಿದ್ದಾರೆ.
ಅಮಿತ್ ಶಾ ಅವರು ಮನೆಯಲ್ಲಿದ್ದರೂ ನಮಗೆ ಭೇಟಿಗೆ ಅವಕಾಶ ಸಿಗಲಿಲ್ಲ.ಅಮಿತ್ ಶಾ ಅವರ ಮನೆ ಬಳಿ ಹೋದಾಗ ನಮ್ಮನ್ನು ಥಾಣಾ ಪೊಲೀಸ್ ಠಾಣೆಗೆ ಕರೆದೊಯ್ದರು. ನಮ್ಮ ಪ್ರತಿಭಟನೆಗೆ ತಡೆಯೊಡ್ಡಿದ್ದಾರೆ ಎಂದು ಹೇಳಿದ್ದಾರೆ.
ಆ.15 ರಂದು ಕೂಡ ಬೆಳಗಾವಿಯಲ್ಲಿ ಪ್ರತಿಭಟನೆ ಮಾಡಲು ಹೋಗುವಾಗಲೂ ನಮ್ಮನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಕರ್ನಾಟಕದಲ್ಲಿ ಆಗಿತ್ತು ಎಂದು ಹೇಳಿದ್ದಾರೆ.
ನಾನು ಎಫ್ಐಆರ್ ಪ್ರತಿ ಕೊಟ್ಟು ನನಗೆ ಆಗಿರುವ ಅನ್ಯಾಯದ ಬಗ್ಗೆ ವಿವರಿಸಿದ್ದೆ.ಪೊಲೀಸ್ ಇಲಾಖೆ ಪ್ರಕರಣದ ದಿಕ್ಕು ತಪ್ಪಿಸುತ್ತಿದೆ. ರಾಜಕುಮಾರ್ ಟಾಕಳೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಯನ್ನು ಬಂಧಿಸಿಲ್ಲ ಎಂದು ಇದೇ ವೇಳೆ ವಿವರಿಸಿದರು.
ರಾಜಕುಮಾರ್ ಟಾಕಳೆ ಒಬ್ಬ ಅತ್ಯಾಚಾರ ಮಾಡಿದ್ದಾನೆ. ನನ್ನ ಖಾಸಗಿ ವಿಡಿಯೋ ಹರಿಯಬಿಟ್ಟು ಮಾನಹಾನಿ ಮಾಡಿದ್ದಾನೆ. ಆದರೂ ಈತನನ್ನು ಬಂಧಿಸಿಲ್ಲ. ಇನ್ನು ನಟೋರಿಯಸ್, ಟೆರರಿಸ್ಟ್ಗಳನ್ನು ಹೇಗೆ ಬಂಧಿಸ್ತಾರೆ? ಎಂದು ಪೊಲೀಸ್ ಇಲಾಖೆ ವಿರುದ್ಧ ನವ್ಯಶ್ರಿ ಇದೇ ವೇಳೆ ಆಕ್ರೋಶ ಹೊರ ಹಾಕಿದ್ದಾರೆ.