ಬೆಂಗಳೂರು;ಟ್ರಾಫಿಕ್ ನಿಂದಾಗಿ ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ತಲುಪುವಲ್ಲಿ ವಿಫಲವಾಗಿ ಒಂದೂವರೆ ವರ್ಷದ ಕಂದಮ್ಮ ಮೃತಪಟ್ಟ ಘಟನೆಯೊಂದು ನಡೆದಿದೆ.
ಅಹಮದ್ ಮತ್ತು ರುಕ್ಸಾನಾ ದಂಪತಿಯು ನಿನ್ನೆ ಪುತ್ರಿ ಹುದಾ ಕೌಸರ್ ಜೊತೆ ತೆರಳುತ್ತಿದ್ದಾಗ ಬೈಕ್ ತುಮಕೂರು ಜಿಲ್ಲೆ ತಿಪಟೂರಿನ ಕೈಮರಾ ಬಳಿ ಬೊಲೆರೋ ವಾಹನಕ್ಕೆ ಢಿಕ್ಕಿಯಾಗಿತ್ತು.
ಈ ವೇಳೆ ಗಾಯಗೊಂಡ ಅಹಮದ್, ತಾಯಿ ರುಕ್ಸಾನಾಗೆ ತಿಪಟೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದಿಂದ ಬೆಂಗಳೂರಿಗೆ ರವಾನಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ರು.
ಆಸ್ಪತ್ರೆಗೆ ಸಾಗಿಸುವ ವೇಳೆ ನೆಲಮಂಗಲ ಬಳಿ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ಟ್ರಾಫಿಕ್ನಿಂದ ಆಸ್ಪತ್ರೆಗೆ ತೆರಳಲಾಗದೆ ಒಂದೂವರೆ ವರ್ಷದ ಮಗು ಮೃತಪಟ್ಟಿದ್ದಾಳೆ.