-ನಿಸಾರ್ ಅಹ್ಮದ್ ಬಂಧಿತ ಆರೋಪಿ.
ಬಂಟ್ವಾಳ;ಯುವಕನನ್ನು ಕತ್ತರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಅಹ್ಮದ್ ಬಂಧಿತ ಆರೋಪಿ.
ನಿಸಾರ್ ಫೆ.18ರಂದು ಪಾಣೆಮಂಗಳೂರು ಸಮೀಪದ ಜೈನರಪೇಟೆ ನಿವಾಸಿ ಸುಲೈಮಾನ್ ಗೆ ಈತ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಇದೀಗ ಬಂಧಿಸಿದ್ದಾರೆ