ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಮಾಡಿ 10 ಕೋಟಿ ರೂ. ಬೇಡಿಕೆ; ಕರೆ ಮಾಡಿದ ಸಂಖ್ಯೆ ಮಂಗಳೂರಿನ ಮಹಿಳೆಯದ್ದು?

ನವದೆಹಲಿ;ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮಂಗಳವಾರ ಎರಡು ಬೆದರಿಕೆ ಕರೆಗಳು ಮಾಡಲಾಗಿದ್ದು, ಕರೆ ಮಾಡಿದ ವ್ಯಕ್ತಿ ತನ್ನ ಹೆಸರನ್ನು ಜಯೇಶ್ ಪೂಜಾರಿ ಎಂದು ಹೇಳಿದ್ದಾನೆ ಎನ್ನಲಾಗಿದೆ.

ನಾಗ್ಪುರದ ಖಮ್ಲಾ ಪ್ರದೇಶದಲ್ಲಿರುವ ಸಚಿವರ ಸಾರ್ವಜನಿಕ ಸಂಪರ್ಕ ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆಗೆ ಬೆದರಿಕೆ ಕರೆ ಮಾಡಲಾಗಿದೆ.ಕರೆಮಾಡಿದ ವ್ಯಕ್ತಿ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ನಿತಿನ್ ಗಡ್ಕರಿ ಅವರ ಕಚೇರಿಗೆ ಮೂರು ಬೆದರಿಕೆ ಕರೆಗಳು ಬಂದವು.ಎಲ್ಲವೂ ಜಯೇಶ್ ಪೂಜಾರಿ ಎಂದು ಹೇಳಿಕೊಂಡ ವ್ಯಕ್ತಿಯಿಂದ ಬಂದವು. ಈ ಸಂಖ್ಯೆ ಮಂಗಳೂರಿನಲ್ಲಿರುವ ಮಹಿಳೆಯದ್ದು ಎಂದು ತಿಳಿದುಬಂದಿದೆ. ನಾವು ಅವಳೊಂದಿಗೆ ಸಂವಹನ ನಡೆಸಿದ್ದೇವೆ, ಅವಳು ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಾಳೆ. ಆಕೆಯ ಸ್ನೇಹಿತ ಅಥವಾ ಜಯೇಶ್ ಪೂಜಾರಿ ಕರೆ ಮಾಡಿದ್ದಾರೆಯೇ ಎಂದು ನಾವು ಕಂಡುಹಿಡಿಯುತ್ತಿದ್ದೇವೆ ಎಂದು ನಾಗ್ಪುರ ಡಿಸಿಪಿ ರಾಹುಲ್ ಮದನೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್