ಮತ ಹಾಕಲು ಬಂದ ನರ್ಸಿಂಗ್ ವಿದ್ಯಾರ್ಥಿನಿಗೆ ಅಪಘಾತದಲ್ಲಿ ಗಂಭೀರ ಗಾಯ; ಸನಾ ಸಾವು ಬದುಕಿನ ನಡುವೆ ಹೋರಾಟ, ಪೋಷಕರು ಕಣ್ಣೀರು…

ಮತ ಹಾಕಲು ಬಂದ ನರ್ಸಿಂಗ್ ವಿದ್ಯಾರ್ಥಿನಿಗೆ ಅಪಘಾತದಲ್ಲಿ ಗಂಭೀರ ಗಾಯ; ಸನಾ ಸಾವು ಬದುಕಿನ ನಡುವೆ ಹೋರಾಟ, ಪೋಷಕರು ಕಣ್ಣೀರು…

ರಾಯಚೂರು:ವೋಟ್ ಹಾಕಿ ಬೈಕ್‌ನಲ್ಲಿ ಮನೆಗೆ ತೆರಳುವಾಗ ಭೀಕರ ರಸ್ತೆ ಅಪಘಾತವಾಗಿ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆ ಪಾಲಾಗಿದ್ದು, ಪೋಷಕರು ಕಂಗಾಲಾಗಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ಮುದಗಲ್ ಬಳಿ ನಡೆದಿದೆ.

ಸನಾ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ವಿದ್ಯಾರ್ಥಿನಿ.

ಮೇ.10ರಂದು ಮತದಾನ ಮಾಡಿ ಮನೆಗೆ ಹೋಗುವಾಗ ರಾಯಚೂರಿನ ಲಿಂಗಸುಗೂರಿನ ಮುದಗಲ್ ಬಳಿ ಅಪಘಾತವಾಗಿ ಸನಾ ಗಂಭೀರವಾಗಿ ಗಾಯಗೊಂಡಿದ್ದಾಳೆ.ಸನಾ ಧಾರವಾಡದಲ್ಲಿ ಬಿಎಸ್‌ಸಿ ನರ್ಸಿಂಗ್ ಓದುತ್ತಿದ್ದರು.ಅಫಘಾತದ ಪರಿಣಾಮ ವಿದ್ಯಾರ್ಥಿನಿಯ ಕೈ, ಕಾಲು ಮುರಿದಿದೆ ಜೊತೆಗೆ ಕಿಡ್ನಿ ಭಾಗದಲ್ಲಿ ಗಂಭೀರ ಗಾಯವಾಗಿದೆ.

ವಿದ್ಯಾರ್ಥಿನಿ ಸನಾ ಮೊದಲ ಬಾರಿಗೆ ಮತದಾನ ಮಾಡಲು ಧಾರವಾಡದಿಂದ ಹಟ್ಟಿಗೆ ಬಂದಿದ್ದಳು.ಮತದಾನ ಮಾಡಿ ಮುದಗಲ್‌ನಿಂದ ಹಟ್ಟಿಗೆ ಮರಳುವಾಗ ಬೈಕ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಈ ದುರಂತ ನಡೆದಿದೆ.

ವಿದ್ಯಾರ್ಥಿನಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಪೋಷಕರು ಬಡವರಾಗಿದ್ದು
ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೆ ಕಂಗಾಲಾಗಿದ್ದಾರೆ.ಮಗಳ ಸ್ಥಿತಿ‌ ಕಂಡು ಕಣ್ಣೀರು ಹಾಕಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com