ಚೈತ್ರಾ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು!

ಬೆಂಗಳೂರು:ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ಬಿಜೆಪಿ ಟಿಕೆಟ್ ಕೊಡುವುದಾಗಿ ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ವಿರುದ್ಧ ಇದೀಗ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ.

ಚೈತ್ರಾ ಕುಂದಾಪುರ ಬಟ್ಟೆ ಅಂಗಡಿ ಹಾಕಿಸಿ ಕೊಡುವುದಾಗಿ 5 ಲಕ್ಷ ಪಡೆದು ವಂಚಿಸಿದ ಆರೋಪದ ಸಂಬಂಧ ಉಡುಪಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಈ ಕುರಿತು ಬಿಜೆಪಿ ಕಾರ್ಯಕರ್ತ ಸುಧೀನ್​ ಎಂಬುವರು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್​ ದಾಖಲಿಸಿದ್ದಾರೆ.

ಸುಧೀನ್ ಬಿಜೆಪಿ ಕಾರ್ಯಕರ್ತನೆ ಆಗಿದ್ದಾರೆ. ಅವರು ಬಟ್ಟೆ ಅಂಗಡಿ ಉದ್ಯಮ ನಡೆಸಲು ನಿರ್ಧರಿಸಿದ್ದರು. ಈ ವೇಳೆ ಚೈತ್ರಾ ಹಣ ಪಡೆದು ವಂಚಿಸಿದ್ದಾಳೆ ಎಂದು ದೂರು ನೀಡಲಾಗಿದೆ.

ಟಾಪ್ ನ್ಯೂಸ್