ಹನೂರು;ಗಣರಾಜ್ಯೋತ್ಸವದ ಹಿನ್ನೆಲೆ ಧ್ವಜಾರೋಹಣ ನೆರವೇರಿಸಿ ವಾಪಾಸ್ಸಾಗುವಾಗ ಸಂಭವಿಸಿದ ಅಪಘಾತದಲ್ಲಿ ಪಿಡಿಒ ಗಂಭೀರವಾಗಿ ಗಾಯಗೊಂಡ ಘಟನೆ ರಾಮಾಪುರ – ದಿನ್ನಳ್ಳಿ ಮಾರ್ಗ ಮಧ್ಯದಲ್ಲಿ ನಡೆದಿದೆ.
ಪಿಡಿಒ ಸೋಮಶೇಖರ್ ಅವರು ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ವಾಪಸ್ಸಾಗುವ ಗೂಡ್ಸ್ ಆಟೋ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸೋಮಶೇಖರ್ ತಲೆಗೆ ತೀವ್ರವಾದ ಗಾಯವಾಗಿದೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.