ಪ್ರವಾದಿ ನಿಂದನೆಗೈದ ಬಿಜೆಪಿ ಶಾಸಕನ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಪ್ರತಿಭಟನೆ, ಹಲವೆಡೆ ಲಾಠೀ ಚಾರ್ಜ್

ಪ್ರವಾದಿ ನಿಂದನೆಗೈದ ಬಿಜೆಪಿ ಶಾಸಕನ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಪ್ರತಿಭಟನೆ,ಹಲವೆಡೆ ಲಾಠೀ ಚಾರ್ಜ್





ಹೈದರಾಬಾದ್​​;ಪ್ರವಾದಿ ನಿಂದನೆ ಬಳಿಕ ಬಂಧಿತನಾಗಿದ್ದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್​​ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಜನರ ಆಕ್ರೋಶ
ತೆಲಂಗಾಣದಲ್ಲಿ ಹೆಚ್ವಳವಾಗಿದೆ.

ಬಿಜೆಪಿ ಶಾಸಕ ರಾಜಾ ಸಿಂಗ್​​ಗೆ ಜಾಮೀನು ಸಿಕ್ಕಿರುವುದನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದಾರೆ.ಕೆಲವೆಡೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.





ಅಂಬರ್​ಪೇಟ್​​,ತಲಬಕಟ್ಟಾ,ಮೊಗಲ್​​ಪುರ,ಖಿಲ್ವತ್​, ಬಹದ್ದೂರ್​ಪುರ ಹಾಗೂ ಚಂಚಲಗುಡಾದಲ್ಲಿ ರಾಜಾಸಿಂಗ್​​​ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಪ್ರತಿಭಟನಾಕಾರರು ಕೋರ್ಟ್​ನ ಆದೇಶವನ್ನು ವಿರೋಧಿಸಿ ಬರ್ಕಾಸ್​ನಿಂದ ಚಂದ್ರಾಯನಗುಟ್ಟದವರೆಗೆ ಮೆರವಣಿಗೆ ನಡೆಸಿದ್ದಾರೆ‌ ಎನ್ನಲಾಗಿದೆ.

ಹೈದರಾಬಾದ್​ನ ಶಾಲಿಬಂಡಾದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ ಏರ್ಪಟ್ಟಿದೆ. ಪ್ರತಿಭಟನಾಕಾರರು ಅಂಗಡಿಗಳನ್ನು ಮುಚ್ಚಿಸಿದ್ದು ಮಾತ್ರವಲ್ಲದೇ ರಾಜಾ ಸಿಂಗ್​ ಪೋಸ್ಟರ್​​ಗೆ ಚಪ್ಪಲಿಯಿಂದ ಹೊಡೆದು ಅವರ ಪ್ರತಿಕೃತಿ ದಹಿಸಿದ್ದಾರೆ.





ನೂಪುರ್ ಶರ್ಮಾ ಬೆನ್ನಲ್ಲೇ ತೆಲಂಗಾಣದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್​ ಪ್ರವಾದಿ ಮೊಹಮ್ಮದ್ ಪೈಗಂಬರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಈಡಾಗಿದ್ದಾರೆ.ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದ ಅಡಿಯಲ್ಲಿ ರಾಜಾ ಸಿಂಗ್​​ರನ್ನು ಬಂಧಿಸಲಾಗಿತ್ತು.ಬಳಿಕ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಲಾಗಿತ್ತು.







ಟಾಪ್ ನ್ಯೂಸ್