ತುಮಕೂರು;ದ್ವೇಷ ಪೂರಿತ ಭಾಷಣ ಪ್ರಕರಣದಲ್ಲಿ ವಿಹೆಚ್ ಪಿ ನಾಯಕ ಶರಣ್ ಪಂಪ್ ವೆಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುಮಕೂರು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ,ಪ್ರಕರಣದಲ್ಲಿ ಜಾಮೀನು ನೀಡಿದರೆ ಸಾರ್ವಜನಿಕ ಶಾಂತಿಯನ್ನು ಹಾಳು ಮಾಡುವ ಉದ್ದೇಶದಿಂದ ಮತ್ತೆ ಭಾಷಣ ಮಾಡುವ ಸಾಧ್ಯತೆ ಬಗ್ಗೆ ಗಮನಿಸಿದೆ ಎನ್ನಲಾಗಿದೆ.
ಜನವರಿ 28ರಂದು ಸಂಘಪರಿವಾರದ ಶೌರ್ಯ ಕಾರ್ಯಕ್ರಮದಲ್ಲಿ ಶರಣ್ ಪಂಪ್ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದರು.ಇದರ ವಿರುದ್ಧ ಸೈಯದ್ ಬುರ್ಹಾನುದ್ದೀನ್ ಎಂಬವರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು.