ಪುತ್ತೂರು:ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಊರಮಾಲು ನಿವಾಸಿಯಾಗಿರುವ ಮನೆಯಲ್ಲಿ ಶಿವರಾಮ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪತ್ನಿ ಫೋನ್ ಕರೆ ಮಾಡಿದಾಗ ಸ್ವೀಕರಿಸುತ್ತಿಲ್ಲವೆಂದು ಪತ್ನಿಯು ಪಕ್ಕದ ಮನೆಯವರಿಗೆ ವಿಚಾರಿಸಿದ್ದಾರೆ.ಅವರು ಮನೆ ಬಳಿ ಬಂದು ನೋಡಿದಾಗ ಶಿವರಾಮ್ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಇನ್ನು ಶಿವರಾಮ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ಒಂದನೇ ವಾರ್ಡ್ ನ ಸದಸ್ಯರಾಗಿದ್ದರು ಎನ್ನಲಾಗಿದೆ.