ಬೆಂಗಳೂರು;ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಶೋಭಾ ಕರಂದ್ಲಾಜೆ ಪರ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಭಾ ಅವರು ಸರ್ಕಾರದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು.
ಸಂತೋಷ್ ಬಣಕ್ಕೆ ಹಿನ್ನೆಡೆಯಾಗುತ್ತಿದ್ದಂತೆ ಯಡಿಯೂರಪ್ಪ ಬಣ ಸಕ್ರಿಯವಾಗುತ್ತಿದೆ.
ಇದಲ್ಲದೆ ಕೇಂದ್ರದಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ಕೂಡ ಚರ್ಚೆಯಾಗುತ್ತಿದ್ದು, ಶೋಭಾ ಕರಂದ್ಲಾಜೆಗೆ ಸಂಪುಟದಿಂದ ಕೈಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.