ನಿಂಬೆ ಬದಲು ಕೊಬ್ಬರಿ ಹಿಡಿದು ಬಂದಿದ್ಯಾ ರೇವಣ್ಣ – ಹಾಸ್ಯ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಇಂದಿನ ಸದನದಲ್ಲಿ ಎಚ್‌.ಡಿ.ರೇವಣ್ಣ ಕೈಯಲ್ಲಿ ಕೊಬ್ಬರಿ ಬೆಂಬಲ ಬೆಲ ಹೆಚ್ಚಳದ ಬಗ್ಗೆ ಚರ್ಚಿಸಲು ಕೊಬ್ಬರಿಯನ್ನೇ ಹಿಡಿದುಕೊಂಡು ಬಂದಿದ್ದು ಸದನದಲ್ಲಿ ನಗುವಿಗೆ ಕಾರಣವಾಗಿದೆ.

ಸದನ ಪ್ರಾರಂಭವಾಗುತ್ತಿದ್ದಂತೆಯೇ ಎಚ್‌.ಡಿ.ರೇವಣ್ಣ ಕೈಯಲ್ಲಿ ಕೊಬ್ಬರಿಯನ್ನು ಪ್ರದರ್ಶಿಸುತ್ತಾ ಎದ್ದು ನಿಂತು ಇದಕ್ಕೇನಾದರೂ ಮಾಡಿ ಎಂದರು.

ಈ ವೇಳೆ ಮಾತನಾಡಲು ಎದ್ದು ನಿಂತಿದ್ದ ಸಿಎಂ ಸಿದ್ದರಾಮಯ್ಯ, ಏ..ರೇವಣ್ಣ ಯಾವಗಲೂ ನಿಂಬೆಹಣ್ಣು ತರ್ತಾ ಇದ್ದೆ. ಇದೇನು ಕೊಬ್ಬರಿ ಹಿಡ್ಕೊಂಡು ಬಂದಿದ್ಯಾ? ರೇವಣ್ಣ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಈ ವೇಳೆ ಕೆಲ ಶಾಸಕರು ನಿಂಬೆಹಣ್ಣಿನ ಬದಲಾಗಿ ಕೊಬ್ಬರಿ ತಂದಿದ್ದಾರೆ ಎಂದು ಹಾಸ್ಯ ಮಾಡಿದ್ದಾರೆ‌.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ