ಸಿಂಗಾಪುರದಲ್ಲಿ ಸರಕಾರ ಉರುಳಿಸಲು ತಂತ್ರ ಕುರಿತ ಡಿಸಿಎಂ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಹಾವೇರಿ:ಸರಕಾರ ಉರುಳಿಸಲು ಸಿಂಗಾಪುರದಲ್ಲಿ
ಪ್ರಯತ್ನ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ,ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ.ಈ ಬಗ್ಗೆ ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.



ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ ಮಾತನಾಡಿದ ಸಿಎಂ, ಈ ಮೂಢ ನಂಬಿಕೆ ಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ.ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ ಮಾತುಕತೆ ನಡೆಸುತ್ತಿದ್ದಾರೆ.ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದು ಸಿಎಂ ಹೇಳಿದ್ದಾರೆ.



ಟಾಪ್ ನ್ಯೂಸ್