ಬೆಂಗಳೂರು:ಸಿದ್ದು ಸಂಪುಟಕ್ಕೆ ಆಯ್ಕೆಯಾದ 24 ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.
ಸಚಿವರಿಗೆ ಪ್ರಮಾಣ ವಚನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೋಧಿಸುತ್ತಿದ್ದಾರೆ.
ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್ ಮತ್ತು ಕಾಂಗ್ರೆಸ್ನ ಎಲ್ಲಾ ಶಾಸಕರು ಹಾಗೂ ಸಚಿವರು ಉಪಸ್ಥಿತರಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರಿಂದ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸುತ್ತಿದ್ದಾರೆ.
ಸಚಿವ ಸ್ಥಾನದ ಅವಕಾಶ ಪಡೆದಿರುವ 24 ಮಂದಿಯಲ್ಲಿ ಹೆಚ್ಚಿನವರು ಈಗಾಗಲೇ ಈ ಹಿಂದಿನ ಸರ್ಕಾರಗಳಲ್ಲಿ ಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಆದರೆ ಈ ಬಾರಿ ಕೆಲ ಹಿರಿಯರಿಗೆ ಸಚಿವ ಸ್ಥಾನ ಕೈ ತಪ್ಪಿದೆ.
ಈ ಬಾರಿ ಮೊದಲ ಬಾರಿಗೆ ಸಚಿವರಾಗುತ್ತಿರುವ ಶಾಸಕರು ಪಟ್ಟಿ…
ಎನ್ಎಸ್. ಬೋಸರಾಜು-ಎಐಸಿಸಿ ಕಾರ್ಯದರ್ಶಿ
ಕೆಎನ್ ರಾಜಣ್ಣ-ಮಧುಗಿರಿ ಕ್ಷೇತ್ರ
ಬಿ. ನಾಗೇಂದ್ರ-ಬಳ್ಳಾರಿ ಗ್ರಾಮೀಣ
ಕೆ. ವೆಂಕಟೇಶ್-ಪಿರಿಯಪಟ್ಟಣ ಕ್ಷೇತ್ರ
ಲಕ್ಷ್ಮಿ ಹೆಬ್ಬಾಳ್ಕರ್-ಬೆಳಗಾವಿ ಗ್ರಾಮೀಣ
ಡಾ.ಎಂ.ಸಿ. ಸುಧಾಕರ್-ಚಿಂತಾಮಣಿ
ಮಧು ಬಂಗಾರಪ್ಪ-ಸೊರಬ ಕ್ಷೇತ್ರ
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಯಾರಿಗೆಲ್ಲ ನಿರಾಶೆ?
ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ತನ್ವೀರ್ ಸೇಠ್, ಶಾಮನೂರು ಶಿವಶಂಕರಪ್ಪ, ಆರ್.ವಿ ದೇಶಪಾಂಡೆ, ಹ್ಯಾರಿಸ್, ಶಿವಲಿಂಗೇಗೌಡ,ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ರುದ್ರಪ್ಪ ಲಮಾಣಿ, ಬಿ, ಅಜಯ್ ಸಿಂಗ್, ಟಿ.ಬಿ ಜಯಚಂದ್ರ, ಎಂ.ಕೃಷ್ಣಪ್ಪ, ವಿಜಯಾನಂದ ಕಾಶಪ್ಪನವರ್, ನರೇಂದ್ರಸ್ವಾಮಿ, ತುಕರಾಂ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.