ಸಿಂಗಾಪುರದಲ್ಲಿ ಭಾರತೀಯ ಮೂಲದ ಯುವಕನಿಗೆ ಗಲ್ಲು ಶಿಕ್ಷೆ; ಗಾಂಜಾ ಸಾಗಾಟ ಮಾಡಲು ಯತ್ನಿಸಿದ್ದಕ್ಕೆ ನೇಣಿಗೆ ಹಾಕಿದ್ರು?

ಸಿಂಗಾಪುರ:ಗಾಂಜಾ ಕಳ್ಳ ಸಾಗಾಣಿಕೆ ಮಾಡಲು‌ ಸಂಚು ರೂಪಿಸಿದ ಹಿನ್ನೆಲೆ ಭಾರತೀಯ ಮೂಲದ ವ್ಯಕ್ತಿಯನ್ನು ಸಿಂಗಾಪುರದಲ್ಲಿ ಗಲ್ಲಿಗೇರಿಸಿರುವ ಬಗ್ಗೆ ವರದಿಯಾಗಿದೆ.

1 ಕೆಜಿ ತೂಕದಷ್ಟು ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು (46) ಸಿಂಗಾಪುರದ ಚಾಂಗಿ ಜೈಲು ಸಂಕೀರ್ಣದಲ್ಲಿ ಬುಧವಾರ ಗಲ್ಲಿಗೇರಿಸಲಾಗಿದೆ.

2017 ರಲ್ಲಿ ತಂಗರಾಜು 1,017.9 ಗ್ರಾಂ. ಗಾಂಜಾವನ್ನು ಕಳ್ಳಸಾಗಣೆ ಮಾಡುವ ಸಂಚಿನಲ್ಲಿ ತೊಡಗಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದ.

ಸಿಂಗಾಪುರದ ಕಾನೂನಿನ ಪ್ರಕಾರ ಗಲ್ಲುಶಿಕ್ಷೆಗೆ ಗುರಿಪಡಿಸಲು ಇರುವ ಪ್ರಮಾಣದ 2 ಪಟ್ಟು ಮಾದಕ ವಸ್ತು ಆತನ ಬಳಿ ಸಿಕ್ಕಿತ್ತು. 2018ರಲ್ಲಿ ಆತನಿಗೆ ಮರಣದಂಡನೆ ವಿಧಿಸಲಾಗಿತ್ತು. ಇದನ್ನು ಮೇಲ್ಮನವಿ ನ್ಯಾಯಾಲಯ ಕೂಡಾ ಬಳಿಕ ಎತ್ತಿ ಹಿಡಿದಿತ್ತು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ತಂಗರಾಜುವಿನ ಗಲ್ಲುಶಿಕ್ಷೆಯನ್ನು ಮರುಪರಿಶೀಲನೆ ನಡೆಸುವಂತೆ ಸಿಂಗಾಪುರ ಸರ್ಕಾರವನ್ನು ಒತ್ತಾಯಿಸಿವೆ. ಆದರೆ ಇವಾವುದಕ್ಕೂ ಕಿವಿಗೊಡದ ಅಲ್ಲಿನ ಸರ್ಕಾರ ತಂಗರಾಜುನನ್ನು ಗಲ್ಲಿಗೇರಿಸಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com