ಸುಳ್ಯ; ಹೊಳೆಯಲ್ಲಿ ಮುಳುಗಿ ಇಬ್ಬರು ಸಹೋದರಿಯರು ಮೃತ್ಯು, ಶಾಲೆಗೆ ರಜೆ ಹಿನ್ನೆಲೆ ನಿನ್ನೆಯಷ್ಟೇ ಬೆಂಗಳೂರಿನಿಂದ ಊರಿಗೆ ಬಂದಿದ್ದ ಬಾಲಕಿಯರ ದುರಂತ ಅಂತ್ಯ

ಸುಳ್ಯ: ಇಬ್ಬರು ಸಹೋದರಿಯರು ಹೊಳೆಯಲ್ಲಿ ಮುಳುಗಿ ನೀರು ಪಾಲಾಗಿರುವ ಘಟನೆ ಕೇನ್ಯ ಕಟ್ಕಲ್ ಬಳಿಯ ಹೊಳೆಯಲ್ಲಿ ನಡೆದಿದೆ.

ಮೂಲತಃ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಸಮೀಪದ ಕೇನ್ಯ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ನೀರು ಪಾಲಾದರು.

ಇವರು ಬೆಂಗಳೂರಿನಲ್ಲಿ ಪೋಷಕರ ಜೊತೆ ವಾಸವಿದ್ದರು,
ನಿನ್ನೆ ಊರಿನಲ್ಲಿ ನಡೆಯುವ ಕಾರ್ಯಕ್ರಮವೊಂದರ ನಿಮಿತ್ತ ಬಳ್ಪಕ್ಕೆ ಬಂದಿದ್ದರು ಎನ್ನಲಾಗಿದೆ.

ಆದರೆ ಸಂಜೆ ವೇಳೆ ಹೊಳೆಗೆ ತೆರಳಿದಾಗ ದುರಂತ ನಡೆದಿದೆ. ಅಗ್ನಿಶಾಮಕ ದಳದಿಂದ ಹುಡುಕಾಟದ ಬಳಿಕ ಇಬ್ಬರ ಮೃತದೇಹಗಳು ರಾತ್ರಿ ವೇಳೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ತೆರಳಿದ್ದಾರೆ.ಇಬ್ಬರ ಸಹೋದರಿಯರ ಅಗಲಿಕೆಯಿಂದ ಕುಟುಮಬ ದುಃಖತಪ್ತವಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com