ಸುಳ್ಯ; ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಹನ್ಸೀಫ್ ಮೃತ ಬಾಲಕ.

ಸುಳ್ಯ:ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ.

ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೆ ಇದ್ದನು. ಸಂಜೆ ಅರಂತೋಡಿನ ತನ್ನ ಅಜ್ಜಿಗೆ ಹೋಗಿ ಮಾತನಾಡಿ ಮನೆಗೆ ಬಂದಿದ್ದ ಎನ್ನಲಾಗಿದೆ.

ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು ಬಳಿಕ ತಾಯಿ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಅರಂತೋಡಿನ ಅಜ್ಜಿ ಮನೆಗೆ ಫೋನ್ ಮಾಡಿ ಹನ್ಸೀಫ್ ಫೋನ್ ರಿಸೀವ್ ಮಾಡುತ್ತಿಲ್ಲ ಎಂದು ಹೇಳಿದರು. ಆತನ ಮಾವ ಬಿಳಿಯಾರಿಗೆ ಬಂದು ನೋಡಿದಾಗ ಈತ ಫ್ಯಾನಿಗೆ ನೇಣು ಹಾಕಿರುವುದು ಕಂಡು ಬಂದಿದೆ ಎನ್ನಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್