ಸುಳ್ಯ: ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆ ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮೃತಪಟ್ಟ ಘಟನೆ ಎಡಮಂಗಲ ಗ್ರಾಮದ ಬಳಕ್ಕಬೆ ಎಂಬಲ್ಲಿ ನಡೆದಿದೆ.
ಗೀತಾ ಮೃತ ಮಹಿಳೆ.
ಶಿವರಾಮ ಎಂಬವರ ಪತ್ನಿ ಗೀತಾ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಬರುವಾಗ ಎಡವಿ ಬಿದ್ದರೆನ್ನಲಾಗಿದೆ. ಈ ಸಂದರ್ಭ ಅವರಲ್ಲಿದ್ದ ಹರಿತವಾದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.