ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ!

ಬೆಂಗಳೂರು:ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ರೀತಿ ಪತ್ತೆಯಾಗಿದ್ದಾರೆ.

ಸುನೀಲ್ ಮೃತ ರೌಡಿ ಶೀಟರ್. ಸುನಿಲ್ ಮೃತದೇಹ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಪತ್ತೆಯಾಗಿದೆ.

ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಸುನಿಲ್ ಇನ್ನು ಹತ್ತು ದಿನಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ.ಆದರೆ ಆತ ಬಿಡುಗಡೆಗೆ ಮೊದಲೇ ಮೃತಪಟ್ಟಿದ್ದಾನೆ.

ರೌಡಿಶೀಟರ್​ ಸುನೀಲ್​ ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್​ ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಎಂದು ಆರೋಪಿಸಿದ್ದ ಎಂದು ವರದಿಯಾಗಿದೆ.

ರೌಡಿಶೀಟರ್​ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ‌. ಪೊಲೀಸರು ತನಿಖೆ ಶುರು ಮಾಡಿದ್ದು,ತನಿಖೆಯ ಬಳಿಕ ಸಾವಿಗೆ ನಿಜವಾದ ಕಾರಣ ತಿಳಿದು ಬರಬೇಕಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com