ಉಳ್ಳಾಲ ಪೊಲೀಸರಿಂದ ತಲಪಾಡಿ ಬಳಿ 10 ಮಂದಿಯ ಬಂಧನ

ಉಳ್ಳಾಲದಲ್ಲಿ 10 ಮಂದಿಯ ಬಂಧನ

ಉಳ್ಳಾಲ:ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ.

ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ ಅಕ್ಬರ್, ಬೀರಿ ನಿವಾಸಿ ಅಬ್ಬಾಸ್, ಮಾಡೂರು ನಿವಾಸಿ ಅಮೀನ್, ಮಾರಿಪಳ್ಳ ನಿವಾಸಿ ಶಂಶೀರ್, ಅಡ್ಯಾರ್ ನಿವಾಸಿ ಅಶ್ವಿತ್, ಇಸ್ಮಾಯಿಲ್, ಬಜಾಲ್ ನಿವಾಸಿ ಹರೀಶ್ ಬಂಧಿತರು ಎಂದು ಗುರುತಿಸಲಾಗಿದೆ.ಬಂಧಿತರಿಂದ
ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರ ತಂಡ
10 ಮಂದಿಯನ್ನು ಬಂಧಿಸಿ, ಬಂಧಿತರಿಂದ ಎಂಟು ಬೈಕ್, ಒಂದು ರಿಕ್ಷಾ ಸಹಿತ 14,500 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com