ಬೈಕ್ ಗೆ ಕಾರು ಢಿಕ್ಕಿ; ದಂಪತಿ ಸ್ಥಳದಲ್ಲೇ ಮೃತ್ಯು
ತುಮಕೂರು:ಬೈಕ್ಗೆ ಕಾರು ಡಿಕ್ಕಿಯಾಗಿ ದಂಪತಿ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಬಳಿ ನಡೆದಿದೆ.
ತುಮಕೂರಿನ ಅಶೋಕನಗರದ ನಿವಾಸಿಗಳಾದ ಶ್ರೀಹರ್ಷ(55 )ಹಾಗೂ ಪತ್ನಿ ಚಂದ್ರಕಲಾ (50) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದಂಪತಿ.
ತುಮಕೂರಿನ ಕಳ್ಳಂಬೆಳ್ಳದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಇವರಿಬ್ಬರು ಬೈಕ್ನಲ್ಲಿ ರಾಷ್ಟ್ರೀಯ ಹೆದ್ದಾರಿ 4ರ ಮಾರುತಿ ಡಾಬಾ ಬಳಿ ಸಾಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.
ಈ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದಲ್ಲಿ ಬೈಕ್ಗೆ ಲಾರಿ ಡಿಕ್ಕಿ, ಬೈಕ್ ಸವಾರ ಸಾವು
ವಿಜಯಪುರ:ನಿಯಂತ್ರಣ ತಪ್ಪಿದ ಲಾರಿ ಹಿಂಬದಿಯಿಂದ ಬೈಕ್ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿ ನಡೆದಿದೆ.
ಬೈಕ್ ಸವಾರ ಮಲಕಾರಿ ಖಂಡಪ್ಪ ತೋರತೆ(33) ಮೃತರು.
ಚಾಲಕನ ನಿಯಂತ್ರಣ ತಪ್ಪಿ ಲಾರಿ ವೇಗವಾಗಿ ಬಂದು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಈ ಕುರಿತು ಝಳಕಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.