-ಜಾಕೀರ್ ಇಸ್ಮಾಯಿಲ್ (36) ಕೊಲೆಯಾದವರು
ತುಮಕೂರು;ಯುವಕನನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಹೊರವಲಯದಲ್ಲಿರುವ ಯಲ್ಲಾಪುರದ ಅಂಗಡಿಯೊಂದರಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಎಂಬವರು ಕೊಲೆಯಾಗಿದ್ದಾರೆ.
ಜಾಕೀರ್ ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದರು.2 ತಿಂಗಳ ಹಿಂದೆ ನೂತನ ಟೈಲ್ಸ್ನ ಅಂಗಡಿಯನ್ನು ಯಲ್ಲಾಪುರದಲ್ಲಿ ತೆರೆದಿದ್ದನು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಪುರವಾಡ್ ಮತ್ತು ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಕೀರ್ ಸಹಾಯಕ ಖಾದರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಜಾಕೀರ್ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.