ಉಡುಪಿ;ಬಸ್ ನಿಲ್ದಾಣದ ಪಕ್ಕದಲ್ಲಿ ಮೂವರು ತೃತೀಯ ಲಿಂಗಿಯರು ಸೇರಿ ಹೊಟೇಲ್ ಪ್ರಾರಂಭಿಸುವ ಮೂಲಕ ದುಡಿಮೆಗೆ ಇಳಿದಿದ್ದು ಮಾದರಿ ಕೆಲಸ ಮಾಡಿದ್ದಾರೆ.
ಪೂರ್ವಿ, ವೈಷ್ಣವಿ ಮತ್ತು ಚಂದನಾ ಎಂಬ ಹೆಸರಿನ ಮೂವರು ತೃತೀಯ ಲಿಂಗಿಗಳು ಉಡುಪಿ ಬಸ್ ನಿಲ್ದಾಣದ ಪಕ್ಕದಲ್ಲಿ ಹೊಸದಾಗಿ ಹೋಟೆಲ್ ತೆರೆದಿದ್ದಾರೆ.
ಈ ಹೋಟೆಲ್ ರಾತ್ರಿ ಮಾತ್ರ ತೆರೆದಿರುತ್ತದೆ.ರಾತ್ರಿ ಪಾಳಯದಲ್ಲಿ ಕೆಲಸ ಮಾಡುವವರಿಗೆ, ರಾತ್ರಿ ಆಹಾರ ಸಿಗದೆ ಪರದಾಡುತ್ತಿರುತ್ತಾರೆ.ಹೀಗಾಗಿ ಇವರಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಹೋಟೆಲ್ ತೆರಯಲಾಗುತ್ತದೆ. ಇದು ದೂರದ ಊರಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ರಾತ್ರಿ ಸಮಯದಲ್ಲಿ ಉಡುಪಿಯಲ್ಲಿ ಎಲ್ಲ ಹೋಟೆಲ್ಗಳು ಬಂದಾಗಿರುತ್ತವೆ.ಈ ಸಮಯದಲ್ಲಿ ರಾತ್ರಿ ಪ್ರಯಾಣಿಕರಿಗೆ ಮತ್ತು ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಜನರಿಗೆ ಆಹಾರ ಸಿಗುವುದಿಲ್ಲ. ಹೀಗಾಗಿ ಮೂವರು ತೃತೀಯ ಲಿಂಗಿಗಳು ಪ್ರಾರಂಭಿಸಿದ ಈ ಹೋಟೆಲ್ ಜನರಿಗೆ ತುಂಬಾ ಅನುಕೂಲಕರವಾಗಿದೆ.