ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ.
ಕೊಕ್ರಾಡಿಯ ನಿವಾಸಿ ಉಜ್ವಲ್ ಹೆಗ್ಡೆ (18) ಮೃತ ವಿದ್ಯಾರ್ಥಿ.
ಇಂದು ಬೆಳಿಗ್ಗೆ ಉಜ್ವಲ್ ಬೈಕ್ ನಲ್ಲಿ ಮೂಡಬಿದ್ರೆಯ ಕಾಲೇಜಿಗೆ ಹೋಗುತ್ತಿದ್ದಾಗ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಉಜ್ವಲ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕುರಿತು ವೇಣೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.