ಉಳ್ಳಾಲ:ಮಾವಿನ ಮರದಿಂದ ಹಣ್ಣು ಕೀಳುವಾಗ ಮರದಿಂದ ಬಿದ್ದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿಯಲ್ಲಿ ನಡೆದಿದೆ.
ಉಳ್ಳಾಲ ಮೊಗವೀರ ಪಟ್ಣ ನಿವಾಸಿ ನಿತಿನ್ ಸುವರ್ಣ(37) ಮೃತಪಟ್ಟ ವ್ಯಕ್ತಿ.
ನಿನ್ನೆ ಸಂಜೆ ನಿತಿನ್ ಅವರು ಅಬ್ಬಕ್ಕ ವೃತ್ತದ ಬೀಚ್ ರಸ್ತೆ ಬದಿಯಲ್ಲಿದ್ದ ಮಾವಿನ ಮರ ಏರಿ ಹಣ್ಣು ಕೀಳುತ್ತಿದ್ದರು. ಈ ವೇಳೆ ಆಯತಪ್ಪಿ ನಿತಿನ್ ಕೆಳಗೆ ಬಿದ್ದಿದ್ದು ತಲೆಗೆ ಕಲ್ಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಗಂಭೀರವಾಗಿದ್ದ ನಿತಿನ್ ಗೆ ಸ್ಥಳೀಯರು ತಕ್ಷಣ ದೇರಳಕಟ್ಟೆಯ ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಅದಾಗಲೇ ನಿತಿನ್ ಸಾವನ್ನಪ್ಪಿದ್ದರು ಎನ್ನಲಾಗಿದೆ.
ಮೃತ ನಿತಿನ್ ಜಪ್ಪಿನ ಮೊಗರುವಿನ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.