ಮಂಗಳೂರು;ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆ ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ.ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.
ಪುದು ಗ್ರಾಮ ಪಂಚಾಯತ್ ಉಪಚುನಾವಣೆ; ಕೈ ಅಭ್ಯರ್ಥಿ ಗೆಲುವು
ಫರಂಗಿಪೇಟೆ; ಪುದು ಗ್ರಾಮ ಪಂಚಾಯತ್ 10 ನೇ ವಾರ್ಡ್ ಮಾರಿಪ್ಪಳ್ಳದಲ್ಲಿ ಸದಸ್ಯರಾದ ಹುಸೈನ್ ಪಾಡಿ ಮರಣ ಹೊಂದಿದ ಹಿನ್ನಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಇಕ್ಬಾಲ್ ಪಾಡಿ ಗೆಲುವು ಸಾಧಿಸಿದ್ದಾರೆ.
ಇಕ್ಬಾಲ್ 385 ಮತ ಪಡೆದು ವಿಜೇತರಾಗಿದ್ದಾರೆ.ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶ್ರಫ್ 140 ಮತ ಪಡೆದರೆ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿ ಲತೀಫ್ 39 ಮತ ಪಡೆದು ಪರಾಭವಗೊಂಡಿದ್ದಾರೆ.