ಉಪ್ಪಿನಂಗಡಿ: ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಕೊಲೆ ಆರೋಪಿ ಗ್ಯಾಂಗ್

ಉಪ್ಪಿನಂಗಡಿ: ಬಜರಂಗದಳದ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆಗೈದು ಗೂಂಡಾಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಹಲ್ಲೆಗೊಳಗಾದವರನ್ನು ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂದು ಗುರುತಿಸಲಾಗಿದೆ.

ಜಾಗದ ತಕರಾರಿಗೆ ಸಂಬಂಧಿಸಿ ಬಜರಂಗದಳ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು ಮತ್ತು ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹಲ್ಲೆಗೊಳಗಾದ ಹರೀಶ ನಾಯ್ಕ ಎಂಬವರು ನೀಡಿದ ದೂರಿನ ಅನ್ವಯ ಉಪ್ಪಿನಂಗಡಿ ಠಾಣೆ ಪೊಲೀಸರು ಎಸ್ಸಿ- ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೌಡಿಶೀಟರ್ ಭರತ್ ಕುಮ್ಡೇಲು ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

ಟಾಪ್ ನ್ಯೂಸ್