ಉಡುಪಿ:ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಯು.ಆರ್. ಸಭಾಪತಿ ಇಂದು ನಿಧನರಾಗಿದ್ದಾರೆ.
ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಸಭಾಪತಿ (71) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
1952 ರಲ್ಲಿ ಹುಟ್ಟಿದ ಅವರು, 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು.ಆ ಬಳಿಕ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು.
1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕ ಆಗಿ ಮರು ಆಯ್ಕೆಯಾಗಿದ್ದರು.
ಇನ್ನು 2012ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯು.ಆರ್.ಸಭಾಪತಿ ಸ್ಪರ್ಧಿಸಿದ್ದರು.2004 ರಲ್ಲಿ ಇವರು ರಘಪತಿ ಭಟ್ ಎದುರು ಪರಾಭವಗೊಂಡಿದ್ದರು.
ಇವರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.ಉಡುಪಿ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಪ್ರಮುಖ ರಾಜಕಾರಣಿ ಇದೀಗ ಅಗಲಿದ್ದು, ಗಣ್ಯರು ಕಂಬನಿ ಮಿಡಿದಿದ್ದಾರೆ.