ಹಿಂದುತ್ವ ಸಂಘಟನೆಗಳು ವಿರೋಧಿಸಿದ್ದಕ್ಕೆ ಮುಸ್ಲಿಂ ಯುವಕನ ಜೊತೆಗಿ‌ನ ಮಗಳ ಮದುವೆಯನ್ನು ರದ್ದುಗೊಳಿಸಿದ ಬಿಜೆಪಿ ನಾಯಕ; ಮಗಳ ವಿವಾಹ ರದ್ಧತಿ ಬಗ್ಗೆ ಓರ್ವ ತಂದೆಯಾಗಿ ಅವರು ಹೇಳಿದ್ದೇನು?

ಉತ್ತರಾಖಂಡ; ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರೊಬ್ಬರು ಹಿಂದುತ್ವ ಸಂಘಟನೆಗಳ ಒತ್ತಡದ ನಂತರ ಮುಸ್ಲಿಂ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.ಮೇ 28ರಂದು ಮದುವೆ ನಿಗದಿಯಾಗಿತ್ತು.

ಪೌರಿ ಪುರಸಭೆ ಅಧ್ಯಕ್ಷ ಹಾಗೂ ಮಾಜಿ ಶಾಸಕ ಯಶಪಾಲ್ ಬೇನಮ್ ಅವರು ತಮ್ಮ ಮಗಳು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುತ್ತಿರುವುದರಿಂದ ಜನಸಾಮಾನ್ಯರಿಂದ ಟೀಕೆಗೆ ಗುರಿಯಾದ ನಂತರ ಮಗಳ ಮದುವೆಯನ್ನು ಮುಂದೂಡಿದ್ದಾರೆ.

ಇವರ ಮದುವೆ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.ಬಿಜೆಪಿಯ ಬೆಂಬಲಿಗರು ಮತ್ತು ವಿರೋಧಿಗಳು ಕೂಡ ಬೇನಾಮ್ ಅನ್ನು ಲವ್ ಜಿಹಾದ್ ಇದು ಅಲ್ವ ಎಂದು ಟೀಕಿಸಿದ್ದರು.

ಈ ವೇಳೆ ಮಾತನಾಡಿದ್ದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಲು ಯೋಚಿಸಿದ್ದೇನೆ.ಆದರೆ ಉದ್ದೇಶಿತ ಮದುವೆಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ ರೀತಿಯನ್ನು ಗಮನದಲ್ಲಿಟ್ಟುಕೊಂಡು ಅದನ್ನು ಮುಂದೂಡಲಾಗಿದೆ ಎಂದು ಅವರು ಹೇಳಿದರು.

ಈಗ ನಾನು ಸಾರ್ವಜನಿಕರ ಧ್ವನಿಯನ್ನೂ ಕೇಳಬೇಕಾಗಿದೆ ಎಂದು ಬೇನಾಂ ಹೇಳಿದರು.ಪೌರಿ ನಗರದಲ್ಲಿ ಮೇ 28 ರಂದು ನಡೆಯಲಿರುವ ಮದುವೆಯನ್ನು ಈಗ ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.

ಶುಕ್ರವಾರ ಇಲ್ಲಿನ ಝಂಡಾ ಚೌಕ್‌ನಲ್ಲಿ ಹಿಂದುತ್ವ ಸಂಘಟನೆಗಳು ಬಿಜೆಪಿ ಮುಖಂಡ ಬೇನಂ ಅವರ ಮಗಳು ಮುಸ್ಲಿಂರನ್ನು ಮದುವೆಯಾಗಿರುವುದನ್ನು ವಿರೋಧಿಸಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು.

ಇಂತಹ ಮದುವೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ದೀಪಕ್ ಗೌಡ ಹೇಳಿದ್ದರು.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com