ಬರೊಬ್ಬರಿ 2.5 ಕೋಟಿ ರೂ.ಹಣ ಮತ್ತು 100 ಪವನ್ ಚಿನ್ನಾಭರಣ ಕಳ್ಳತನ ಮಾಡಿದ ಯುವತಿ

ಬರೊಬ್ಬರಿ 2.5 ಕೋಟಿ ರೂ.ಹಣ ಮತ್ತು 100 ಪವನ್ ಚಿನ್ನಾಭರಣ ಕಳ್ಳತನ ಮಾಡಿದ ಯುವತಿ

ಕೊಯಮತ್ತೂರು;ಯುವತಿಯೋರ್ವಳು ತನ್ನ ಮಾಲಕಿಯ ಮನೆಯಿಂದ ಹಣ ಮತ್ತು ಚಿನ್ನವನ್ನು ದೋಚಿ ಪರಾರಿಯಾಗಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.

ಸಿಂಘನಲ್ಲೂರು ಮೂಲದ ವರ್ಷಿಣಿ (29) ಕೊಯಮತ್ತೂರಿನ ಪುಲಿಯಾಕುಲಂ ಗ್ರೀನ್‌ಫೀಲ್ಡ್ ಕಾಲೋನಿ ನಿವಾಸಿ ರಾಜೇಶ್ವರಿ (63) ಅವರ ಮನೆಯಲ್ಲಿ ದರೋಡೆ ಮಾಡಿದ್ದಾರೆ‌.

ತಿರುವಳ್ಳೂರು ನಿವಾಸಿ ಅರುಣ್ ಕುಮಾರ್ (37) ಮತ್ತು ಆತನ ಸ್ನೇಹಿತರಾದ ಸುರೇಂದ್ರನ್ ಮತ್ತು ಅರುಣ್ ಕೂಡ ಪ್ರಕರಣದಲ್ಲಿ ಪಾತ್ರ ವಹಿಸಿದ್ದಾರೆ.

ಮಾರ್ಚ್ 20ರಂದು ಈ ಘಟನೆ ನಡೆದಿದೆ. ಆರೋಪಿಗಳು 2.5 ಕೋಟಿ ರೂ ಮತ್ತು 100 ಪವನ್ ಚಿನ್ನವನ್ನು ಕಳವು ಮಾಡಿದ್ದಾರೆ.

ರಾಜೇಶ್ವರಿ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ. ಅವಳಿಗೆ ಸಹಾಯ ಮಾಡುತ್ತಿದ್ದ ವರ್ಷಿಣಿ ಆಕೆಯ ಆಹಾರದಲ್ಲಿ ಮಾದಕ ದ್ರವ್ಯವನ್ನು ನೀಡಿ ಅವಳು ನಿದ್ರೆಗೆ ಜಾರಿದ ನಂತರ ಅವಳು ಹಣ ಮತ್ತು ಚಿನ್ನವನ್ನು ಕದ್ದು ಪರಾರಿಯಾಗಿದ್ದಾಳೆ ಎನ್ನಲಾಗಿದೆ.

ಆಕೆಯ ಸ್ನೇಹಿತ ಅರುಣ್ ಸಹಾಯದಿಂದ ಕಳ್ಳತನ ನಡೆದಿದೆ. ಮಹಿಳೆಗಾಗಿ ಶೋಧವನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com