ಮಹಿಳೆಯ ಬರ್ಬರ ಕೊಲೆ:ಸಂಬಂಧಿಕರಿಂದಲೇ ಕೃತ್ಯ

ಕಲಬುರಗಿ:ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮನೆಗೆ ನುಗ್ಗಿದ ಸಂಬಂಧಿಕರು ಹರಿತವಾದ ಆಯುಧದಿಂದ ಮಹಿಳೆಯೊಬ್ಬರಿಗೆ ಇರಿದು ಕೊಲೆ ಮಾಡಿರುವ ಘಟನೆ ರೇವಣಸಿದ್ದೇಶ್ವರ್ ಕಾಲೋನಿಯ ಕೆ.ಕೆ.ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಆರೋಪಿಗಳು ಮಹಿಳೆಯ ಜೊತೆಗಿದ್ದ ನಾಲ್ವರನ್ನು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾರೆ.

ವಿಜಯಲಕ್ಷ್ಮೀ ಮೃತರು. ಈಕೆಯನ್ನು ರಕ್ಷಿಸಲು ಹೋದ ನಾಲ್ವರು ಮಕ್ಕಳಾದ ಮಹಾದೇವ, ರೇಣುಕಾ, ಪಲ್ಲವಿ, ನಾಗರಾಜ ಗಾಯಗೊಂಡಿದ್ದಾರೆ.

ಘಟನೆಗೆ ಆಸ್ತಿ ವಿವಾದವೇ ಕಾರಣ ಎಂದು ಹೇಳಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಲಕ್ಷ್ಮೀ ಅವರ ಪತಿ ಮಲ್ಕಯ್ಯ ಮಠ ಅವರು ಕೆಲಸಕ್ಕೆ ಹೋಗಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಅವರ ಸಂಬಂಧಿಕರಾದ ರೇವಣಸಿದ್ದಯ್ಯ ಮಠ, ಸಿದ್ರಾಮಯ್ಯ ಮಠ ಮತ್ತು ಮಡೆಪ್ಪ ಸ್ವಾಮಿ ಮಾರಕಾಸ್ತ್ರಗಳೊಂದಿಗೆ ಮನೆಯೊಳಗೆ ನುಗ್ಗಿ ಅವಾಚ್ಯವಾಗಿ ನಿಂದಿಸಿ, ಆಸ್ತಿ ಬೇಡುತ್ತೀರಾ ಎಂದೆಲ್ಲ ಹೆದರಿಸಿದ್ದಾರೆ. ಮಾತಿಗೆ ಮಾತು ಬೆಳೆದು ರೇವಣಸಿದ್ದಯ್ಯ ಸ್ವಾಮಿ ಚಾಕು ತೆಗೆದು ವಿಜಯಲಕ್ಷ್ಮೀ ಅವರ ಹೊಟ್ಟೆ, ತಲೆ ಮತ್ತು ಬಲರಟ್ಟೆಗೆ ಇರಿದು ಕೊಲೆ ಮಾಡಿದ್ದಾನೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ