BIG NEWS ವಿಜಯಪುರದಲ್ಲಿ ಇವಿಎಂ ಮೆಷಿನ್ ಗಳನ್ನು ಪುಡಿಮಾಡಿ ಚುನಾವಣಾ ಸಿಬ್ಬಂದಿಗಳಿಗೆ ಥಳಿಸಿದ ಗ್ರಾಮಸ್ಥರು; ಘಟನೆಗೆ ಕಾರಣ ಏನು? ಇಲ್ಲಿದೆ ಮಾಹಿತಿ…

ವಿಜಯಪುರ;ಚುನಾವಣೆ ದಿನ ವಿಜಯಪುರದಲ್ಲಿ ಭಾರೀ ಹೈಡ್ರಾಮವೇ‌ ನಡೆದಿದೆ.ಹೆಚ್ಚುವರಿ ಮತಯಂತ್ರ ಸಾಗಾಟ ಮಾಡುತ್ತಿದ್ದ ಅಧಿಕಾರಿಗಳನ್ನು ತಡೆದ ಜನ ಮತಯಂತ್ರಗಳನ್ನು ಪುಡಿಪುಡಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಮತದಾನ ಪ್ರಕ್ರಿಯೆ ಅರ್ಧಕ್ಕೆ ಸ್ಥಗಿತಗೊಳಿಸಿ ಮತಯಂತ್ರ ಕೊಂಡೊಯ್ಯುತ್ತಿದ್ದಾರೆ ಎಂದು ತಪ್ಪಾಗಿ ಭಾವಿಸಿ ಹಲ್ಲೆ ನಡೆದಿದೆ ಎನ್ನಲಾಗಿದೆ.

ಮಸಬಿನಾಳ ಗ್ರಾಮದಲ್ಲಿ ಚುನಾವಣಾ ಅಧಿಕಾರಿಗಳು ಮತಯಂತ್ರಗಳನ್ನು ಅರ್ಧಕ್ಕೆ ತೆಗೆದುಕೊಂಡು ಹೋಗುತ್ತಿರುವುದನ್ನು ಕಂಡು ಗ್ರಾಮಸ್ಥರು ಚುನಾವಣಾ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.

ಆದರೆ, ಚುನಾವಣಾ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡಲ್ಲ ಎನ್ನಲಾಗಿದೆ. ಹೆಚ್ಚುವರಿ ಯಂತ್ರಗಳು ಎಂದು ಹೇಳಿದ್ದಾರೆ ಆದರೆ ಇದನ್ನು ಕೇಳದೆ ಈ ಎಲ್ಲ ಮತಯಂತ್ರಗಳನ್ನು ಅರ್ಧಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಗಲಾಟೆ ಆರಂಭಿಸಿದ್ದಾರೆ. ವಾಗ್ವಾದ ಮಾಡಿ ಅಧಿಕಾರಿಗಳನ್ನು ಥಳಿಸಿ ಮತಯಂತ್ರಗಳನ್ನು ಕಿತ್ತುಕೊಂಡಿದ್ದಾರೆ. ಗ್ರಾಮಸ್ಥರೆಲ್ಲರೂ ಸೇರಿ, ಮತಯಂತ್ರಗಳನ್ನು ಒಡೆದು ಹಾಕಿದ್ದಾರೆ.

ಇನ್ನು ಚುನಾವಣಾ ಅಧಿಕಾರಿಗಳು ಇವಿಎಂ ಮಷೀನ್‌ಗಳನ್ನು ಕಾರಿನಲ್ಲಿ ಇಟ್ಟುಕೊಂಡು ಓಡಾಡುವುದನ್ನು ನೋಡಿದ ಸಿಬ್ಬಂದಿಗಳನ್ನು ತಪ್ಪು ಭಾವಿಸಿ ಇವಿಎಂ, ವಿವಿಪ್ಯಾಟ್ ‌ಮಷೀನ್‌ಗನ್ನು ಒಡೆದು ಹಾಕಿದ್ದಾರೆ.ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com