ವಿಜಯಪುರ ಪಾಲಿಕೆ ಸದಸ್ಯೆಯ ಪತಿ ಹೈದರ್ ಅಲಿ ಹತ್ಯೆ ಕೇಸ್; ಐವರ ಮೇಲೆ ಕೇಸ್ ದಾಖಲು

ವಿಜಯಪುರ:ವಿಜಯಪುರ ಮಹಾನಗರ ಪಾಲಿಕೆಯ ಸದಸ್ಯೆಯ ಪತಿ ಹೈದರ್ ಅಲಿ ನದಾಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿರುದ್ಧ ಜಲನಗರ‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಗರದ ಶೇಖ್ ಅಹ್ಮದ್ ಸುನೇನ್‍ಸಾಬ್, ಎಸ್.ಎಸ್ ಖಾದ್ರಿ, ತನ್ವೀರ್‌ಪಿರ್, ಇಕ್ಬಾಲ್‍ಪೀರ್ ಪೀರ್‌ಜಾದ್, ವಾಜೀದ್‍ಪೀರ್ ಹಾಗೂ ಶಾನ್‍ವಾಜ್ ದಫೇದಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು.ತನಿಖೆಯ ನಂತರ ಕೊಲೆಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಹಾಡಹಗಲೇ ದುಷ್ಕರ್ಮಿಗಳು ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ಗುಂಡು ಹಾರಿಸಿ ಹೈದರ್ ಅಲಿ ನದಾಫ್‍ ಗೆ ಹತ್ಯೆಗೈದು ಪರಾರಿಯಾಗಿದ್ದರು.

ಮೃತನ ಪತ್ನಿ ನಿಶಾತ್ ಹೈದರ್ ನದಾಫ್ ಅವರು ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆಯಾಗಿದ್ದಾರೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com