ಬೆಂಗಳೂರು;ಬಿಜೆಪಿ ವಿರುದ್ಧ ಬಹಿರಂಗವಾಗಿ ಮಾತನಾಡಿದ ಇಬ್ಬರು ಹಿರಿಯ ನಾಯಕರಿಗೆ ನೊಟೀಸ್ ನೀಡಲಾಗಿದೆ.
ಬಿಜೆಪಿಯು ಬಹಿರಂಗವಾಗಿ ಪಕ್ಷದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ಹೇಳಿಕೆ ಕೊಡುತ್ತಿರುವವರಿಗೆ ಹೇಳಿಕೆ ನೀಡದಂತೆ ಎಚ್ಚರಿಕೆಯ ನೋಟಿಸ್ ಜಾರಿಗೊಳಿಸಿದೆ.
ಬಿಜೆಪಿ ಶಿಸ್ತು ಪಾಲನಾ ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿದಂತೆ ಕೆಲವರಿಗೆ ನೋಟಿಸ್ ನೀಡಲಾಗಿದೆ.
ಬಿಜೆಪಿ ಶಿಸ್ತು ಪಾಲನಾ ಸಮಿತಿ ನೀಡಿರುವಂತ ನೋಟಿಸ್ ನಲ್ಲಿ ಬಹಿರಂಗವಾಗಿ ಬಿಜೆಪಿ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಲಾಗಿದೆ.